ಇನ್ನು ಸುಮಾರು 10 ಕಿಲೋ ಮೀಟರು ಗಳಷ್ಟು ಪ್ರಯಾಣ ಮಾಡಿದರೆ ನಮ್ಮ ಕೈಲಾಸ ಪರ್ವತದ ಪ್ರದಕ್ಷಿಣೆ ಮುಗಿಯುತ್ತದೆ. ಇಷ್ಟು ಬಂದವರಿಗೆ ಕೂಡಾ ನಮಗೆ ಇನ್ನುಳಿದ 10 ಕಿ.ಮೀ.ಚಾರಣ ಮಾಡುವುದು ತುಂಬಾ ಕಷ್ಟ... ಅಲ್ಲಿ ನಿಂತು ಕೆಲವು ಫೋಟೋ ಗಳನ್ನು ತೆಗೆಯುತ್ತಿದ್ದಾಗಲೇ ಶುರುವಾಯಿತು ಮಳೆ. ಮಳೆಗೆ ತಪ್ಪಿಸಿಕೊಳ್ಳಲು ಅಲ್ಲಿ ಎಲ್ಲೂ ಜಾಗವಿಲ್ಲ. ದೂರ ದೂರದವರೆಗೂ ಮರವಿಲ್ಲ, ಸೂರೆನ್ನುವ ಪದ ಕೂಡ ಹತ್ತಿರ ಸುಳಿಯುತ್ತಿರಲಿಲ್ಲ. ಇದ್ದ ಒಂದೇ ದಾರಿಯೆಂದರೆ ನಾವು ಹಾಕಿದ ರೈನ್ ಕೋಟನ್ನು ಅಗಲವಾಗಿ ಬಿಡಿಸಿಕೊಂದೆವು.. ಆಕಾಶನೋಡುತ್ತಿದ್ದ ಬೆಟ್ಟ, ಈಗ ಪಾತಾಳ ನೋಡುತ್ತಿದೆ. ಮಳೆಗೆ ಕಲ್ಲುಗಳು ಜಾರುತ್ತಿವೆ ಇಂಥಹ ಪರಿಸ್ಥಿತಿಯಲ್ಲಿ ಜೋರಾಗಿ ಓಡುವುದು ಅಪಾಯವನ್ನು ಎಳೆದುಕೊಂಡಂತೆ. ಮಳೆಯಲ್ಲಿ ನೆನೆದರೆ ಒಂದು ತೊಂದರೆ ಬೇಗ ಓಡಿದರೆ ಇನ್ನೊಂದು ತೊಂದರೆ. ಬೇರೆ ದಾರಿ ಇಲ್ಲದೆ ಹರ ಸಾಹಸಮಾಡಿ ಬ್ಯಾಗಲ್ಲಿದ್ದ ಬ್ರೆಡ್ ಜ್ಯಾಮ್ ತಿಂದೆವು. . ಮಳೆ ಮತ್ತು ಚಳಿಗೆ ಕುಸಿದು ಹೋಗಿದ್ದ ಎಲ್ಲರೂ ನಡುಗುತ್ತಿದ್ದೆವು. ಸಮಯ ಸಂಜೆ ೫.೦೦ ಘಂಟೆ.ಸುಮಾರು ಒಂದು ಘಂಟೆಯಷ್ಟು ವಿಶ್ರಾಂತಿಯ ಸಮಯ ... ಚಳಿಗೆ ಎಲ್ಲರೂ ನಲುಗಿ ಹೋಗಿದ್ದರು. ಈ ಜಾಗಕ್ಕೆ ಬಂದ ದಿನ ನಾನು ಮುಖ ತೊಳೆಯಲು ಹೋಗಿ ನೀರು ಮುಟ್ಟಿದ್ದೆ. ನೀರು ಹಾಕಿಕೊಂಡಾಗ ಅಂಥ ತೊಂದರೆ ಆಗಲಿಲ್ಲ, ಎರಡು ಮೂರು ಸಲು ನೀರು ಹಾಕಿಕೊಂಡೆ, ಮುಖ ಎನ್ನುವುದು ಹಾಗೆ ಮರಗಟ್ಟಿತ್ತು. ಕೈಗಳನ್ನು ಉಜ್ಜಿಕೊಂಡೆ .. ಜೋರಾಗಿ ಉರಿಯತೊಡಗಿತು. ಸುಮಾರು ಇಪ್ಪತ್ತು ನಿಮಿಷಗಳ ಕಾಲ ಉರಿಯುತ್ತಿದ್ದ ಕೈ, ಬ್ರೆಡ್ ತಿಂದು ಗ್ಲೌಸ್ ಹಾಕುವ ತನಕ ಸುಮ್ಮನಾಗಲಿಲ್ಲ. ಇದನ್ನು ಅನುಭವಿಸಿದ್ದ ನಾನು ಮತ್ತೆಂದು ಚಳಿಯಲ್ಲಿ ತಣ್ಣೀರಿನ ಜೊತೆಗೆ ಸರಸವಾಡಲಿಲ್ಲ. ನಮ್ಮ ಪ್ರಯಾಣ ಮುಂದುವರಿಯಿತು. ಸುಮಾರು ೨ ಕಿ.ಮೀ ದೂರದಷ್ಟು ನಡೆದಾಗ ವಿಶಾಲವಾದ ಬಯಲಿನಲ್ಲಿ ನಡೆಯುವ ಭಾಗ್ಯ ನನ್ನ ಕಾಲಿಗೆ ಒದಗಿ ಬಂತು.ಇನ್ನು ಕೇವಲ ೫ ಕಿಮೀ ದೂರ ನಡೆದರೆ ನಮ್ಮ ಚಾರಣ ಮುಗಿಯುತ್ತದೆ ಎಂದು ಪಾಂಡೆ ಹೇಳಿದಾಗ ನಮ್ಮಲ್ಲಿ ಏನೋ ಸ್ವಲ್ಪ ಸಮಾಧಾನ.ನನ್ನ ಟಾರ್ಚ್ ಲೈಟಿನಲ್ಲಿ ಬ್ಯಾಟರೀ ಖಾಲಿಯಾಗಿ ದಾರಿಯೂ ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ.ಒಬ್ಬರನ್ನೊಬ್ಬರು ಹೋದೆವು. ನಮ್ಮ ನಡಿಗೆ ಬಹಳ ನಿಧಾನವಾಗಿದ್ದರಿಂದ ಅವರು ಬಂದಿದ್ದು ನಮಗೂ ಖುಷಿಯಾಯಿತು . ದೂರದಲ್ಲಿ ಅಸ್ಪಷ್ಟವಾಗಿ ಸಾಲು ಸಾಲು ಬೆಳಕು ಕಾಣುತ್ತಿದ್ದವು ...ಹತ್ತಿರವಾಗುತ್ತಿದ್ದಂತೆಯೇ ಆ ಬೆಳಕು ಸ್ಪಷ್ಟವಾಯಿತು.ನಮ್ಮ ಕಾರುಗಳು ನಮ್ಮನ್ನು ಕರೆದುಕೊಂಡು ಹೋಗಲು ಕಾದಿದ್ದವು. ಡ್ರೈವರ್ ಗಳು ನಮ್ಮನ್ನು ಕರೆದುಕೊಂಡು ಹೋಗಲು ಸುಮಾರು ೧.೫೦ ಕಿ.ಮೀ ಗಳಷ್ಟು ಮುಂದೆ ಬಂದರು. ನಮ್ಮ ಡ್ರೈವರ್ ತುತೋಯಿ ನಮ್ಮನ್ನು ಸ್ವಾಗತಿಸಿದ.ಎಲ್ಲರೂ ಸೇರಿ ಫೋಟೋ ತೆಗೆಸಿಕೊಂಡೆವು.ನಮ್ಮ ಡ್ರೈವರ್ ,ಶೇರ್ಪಾ ಹಾಗೂ ನನ್ನ ಜೊತೆ ಚಾರಣ ಮಾಡಿದ ಉಷಾ,ಕೇಶವಣ್ಣ,ಕಿಶೋರ್ ಎಲ್ಲರೂ ಕಾರಿನತ್ತ ನಡೆಯುತ್ತಾ ಹೋದೆವು. ಕಾರಿನಲ್ಲಿ ದಾರ್ಚಿನ್ ನತ್ತ ಪ್ರಯಾಣ ಮಾಡಿದೆವು. ರೂಮಿಗೆ ಬ೦ದವನೇ ಕುಳಿತು ಎರಡು ಸ್ಪೂನ್ ನೀರು ಕುಡಿದಿರಬೇಕು...... ತಲೆ ಧಿಮ್ಮೆ೦ದಿತು....... ಮೈ ತು೦ಬಾ ಬೆವರು! ತಲೆ ಗಿರಗಿರ್ರನೇ ಸುತ್ತತೊಡಗಿತು. ವಾಂತಿ ಆಯಿತು. ಡಾಕ್ಟರ್ ಬಂದು ನನಗೆ ಔಷಧಿ ಕೊಟ್ಟರು. ದೇಹ ನಿದ್ದೆ ಬಯಸುತ್ತಿದೆ, ಮನಸ್ಸು ಪೂರ್ತಿ ಕೈಲಾಸದಲ್ಲಿ ತೇಲಾಡುತ್ತಿದೆ . ನಾನು ಊರಿಂದ ಬಂದು ಇಂದಿಗೆ ೩೦ ದಿನಗಳಾದವು..ಈ ಮೂವತ್ತು ದಿನಗಳ ಪ್ರತಿ ಘಳಿಗೆಯೂ ಅತ್ಯದ್ಭುತವಾಗಿ ಕಳೆಯಲ್ಪಟ್ಟಿವೆ.ನನ್ನ ಆನಂದಕ್ಕಿಂದು ಪಾರವೇ ಇಲ್ಲದಂತಾಗಿದೆ. ನನ್ನ ಈ ಸಂಭ್ರಮವನ್ನು.ಅಕ್ಷರಕ್ಕಿಳಿಸುವ ಒಂದು ಪುಟ್ಟ ಪ್ರಯತ್ನವಿದು.ಹಾಗೆ ನಿದ್ದೆಗೆ ಜಾರಿದೆ..
ನನ್ನ ಮೊದಲ ಮಾತು...
ನಾನು ಮಾಡಾವು ಗಣೇಶ.
ನನ್ನ ಮನದ ಮಾತುಗಳನ್ನು ಇಲ್ಲಿ ಬ್ಲಾಗಿಸುತ್ತಿದ್ದೇನೆ...
ನಿಮ್ಮ ಓದುವಿಕೆ ಹಾಗೂ ಸಹಕಾರವನ್ನು ನಿರೀಕ್ಷೆ ಮಾಡುತ್ತೇನೆ.
ಭಾವನೆಗಳು ಉಕ್ಕಿ, ನೆನಪುಗಳ ಬುತ್ತಿ ಬಿಚ್ಚಿ, ಕಲ್ಪನೆಯ ಕಂಪು ಪಸರಿಸಿದಾಗ... «»«»«»«»«»«»«»«»«» ಮನಸಿನಾಳದ ಮಾತು ಹೊರಹೊಮ್ಮಿಸಲು ಇದೊಂದು ಪೀಠಿಕೆ!... ಒಳ್ಳೆಯ ಲೇಖನಗಳ ಬರೆಯಲು ಬೇಕು ನಿಮ್ಮಯ ಹಾರೈಕೆ. «»«»«»«»«»«»«»«»«»«»«»«»«»«»«» ಸದಾ ನಿಮ್ಮವ,
~
ಗಣೇಶ್ ಭಟ್,ಮಾಡಾವು
ನನ್ನ ಮನದ ಮಾತುಗಳನ್ನು ಇಲ್ಲಿ ಬ್ಲಾಗಿಸುತ್ತಿದ್ದೇನೆ...
ನಿಮ್ಮ ಓದುವಿಕೆ ಹಾಗೂ ಸಹಕಾರವನ್ನು ನಿರೀಕ್ಷೆ ಮಾಡುತ್ತೇನೆ.
ಭಾವನೆಗಳು ಉಕ್ಕಿ, ನೆನಪುಗಳ ಬುತ್ತಿ ಬಿಚ್ಚಿ, ಕಲ್ಪನೆಯ ಕಂಪು ಪಸರಿಸಿದಾಗ... «»«»«»«»«»«»«»«»«» ಮನಸಿನಾಳದ ಮಾತು ಹೊರಹೊಮ್ಮಿಸಲು ಇದೊಂದು ಪೀಠಿಕೆ!... ಒಳ್ಳೆಯ ಲೇಖನಗಳ ಬರೆಯಲು ಬೇಕು ನಿಮ್ಮಯ ಹಾರೈಕೆ. «»«»«»«»«»«»«»«»«»«»«»«»«»«»«» ಸದಾ ನಿಮ್ಮವ,
~
ಗಣೇಶ್ ಭಟ್,ಮಾಡಾವು
Friday, December 11, 2009
ಮಾನಸ ಸರೋವರ ಯಾತ್ರೆ -22
Subscribe to:
Post Comments (Atom)
No comments:
Post a Comment